ಸುದ್ದಿ ಕಣಜ.ಕಾಂ | DISTRICT | CURFEW MEETING
ಶಿವಮೊಗ್ಗ: ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯ ಟಾಪ್ 5 ಅಂಶ
- ಸರ್ಕಾರದ ನಿಗದಿತ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜು ನಡೆಸಬೇಕು. ಯಾವುದೇ ನಿಗದಿತ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುವುದು.
- ಕ್ಲಸ್ಟರ್ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳನ್ನು ಮುಚ್ಚಲು ಕ್ರಮ ವಹಿಸಲಾಗುವುದು. ಕೋವಿಡ್ ಹರಡುವಿಕೆಯನ್ನು ತಡೆಯಲು ವಸತಿ ಶಾಲೆಗಳು, ಆಶ್ರಯ ತಾಣಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ರ್ಯಾಂಡಮ್ ಸ್ಯಾಂಪಲ್ ಸಂಗ್ರಹ ಮಾಡಿ ತಪಾಸಣೆ.
- ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸುವ ಪೂರ್ವದಲ್ಲಿ ಸ್ಥಳೀಯಾಡಳಿತದಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು.
- ಮಹಾರಾಷ್ಟ್ರ, ಕೇರಳ, ಗೋವಾ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ರ್ಯಾಂಡಮ್ ತಪಾಸಣೆ ಮಾಡಬೇಕು. ಇದಕ್ಕಾಗಿ ಶಿವಮೊಗ್ಗ, ಭದ್ರಾವತಿ ಬಸ್ ನಿಲ್ದಾಣ ಹಾಗೂ ಆಗುಂಬೆ ಚೆಕ್ ಪೋಸ್ಟ್ (check post) ನಲ್ಲಿ ವ್ಯವಸ್ಥೆ ಮಾಡಬೇಕು. ಹೊರರಾಜ್ಯ ಮತ್ತು ಹೊರದೇಶಗಳಿಂದ ಬಂದವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ನಿಗಾ ಇರಿಸಬೇಕು.
- ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕನಿಷ್ಠ 150 ಹಾಸಿಗೆ ಸಾಮರ್ಥ್ಯದ ಹಾಸ್ಟೆಲ್ ಅಥವಾ ಸಮುದಾಯ ಭವನಗಳನ್ನು ಗುರುತಿಸಿ ಸಜ್ಜುಗೊಳಿಸಬೇಕು. 15 ವರ್ಷದಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯವನ್ನು ಚುರುಕುಗೊಳಿಸಿ, ಪ್ರತಿಯೊಬ್ಬರಿಗೂ ಆದಷ್ಟು ಬೇಗನೆ ಲಸಿಕೆ ನೀಡಬೇಕು. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಯಾವುದೇ ತೊಂದರೆಯಿರುವುದಿಲ್ಲ.
https://www.suddikanaja.com/2021/08/10/home-minister-aaraga-jnanendra-meeting-with-police-officials/