ಸುದ್ದಿ ಕಣಜ.ಕಾಂ | KARNATAKA | WEEKEND CURFEW
ಸಾಗರ: ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಸರ್ಕಾರದ ವೀಕೆಂಡ್ ಕರ್ಫ್ಯೂ ಆದೇಶದ ಅನ್ವಯ ಶನಿವಾರ ಮತ್ತು ಭಾನುವಾರ ಸಿಗಂದೂರು ಚೌಡೇಶ್ವರಿ ದೇವಸ್ಥಾನವು ಸಂಪೂರ್ಣ ಬಂದ್ ಇರಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ ಮಾರ್ಗಸೂಚಿಯಂತೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಇದೆ. ಭಕ್ತಾದಿಗಳು ಸಹಕರಿಸುವಂತೆ ಧರ್ಮಾಧಿಕಾರಿ ಡಾ. ಎಸ್ ರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.