ಸುದ್ದಿ ಕಣಜ.ಕಾಂ | DISTRICT | NSUI
ಶಿವಮೊಗ್ಗ: ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ ಎಸ್.ಎನ್. ವಿಜಯ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಆದೇಶ ಮಾಡಿದ್ದಾರೆ.
ಈ ಹಿಂದೆ ಶಿವಮೊಗ್ಗ ಎನ್.ಎಸ್.ಯು.ಐ. ನಗರ ಘಟಕದ ಅಧ್ಯಕ್ಷರಾಗಿದ್ದ ವಿಜಯ್ ಕುಮಾರ್ ಅವರು ನಿರಂತರವಾಗಿ ವಿದ್ಯಾರ್ಥಿಗಳ ಪರ ಕೆಲಸ ನಿರ್ವಹಿಸುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಇವರ ಚಟುವಟಿಕೆಯನ್ನು ಗುರುತಿಸಿ ಕೀರ್ತಿ ಗಣೇಶ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಸೂಚನೆ ನೀಡಿದ್ದಾರೆ.