ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬೈಕ್, ಟಾಟಾ ಏಸ್ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಭವಾನಿ ಹೋಟೆಲ್ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
READ | ಮಲವಗೊಪ್ಪ ಬಳಿ ನಿತ್ರಾಣಗೊಂಡಿದ್ದ ನವಿಲು ರಕ್ಷಣೆ, ತ್ಯಾವರೆಕೊಪ್ಪಕ್ಕೆ ಹಸ್ತಾಂತರ
ಮಹಿಳೆಯೊಬ್ಬರು ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಟೈಯರ್ ಸ್ಫೋಟಗೊಂಡಿದೆ. ಆಗ ಕಾರನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಐದು ದ್ವಿಚಕ್ರ ವಾಹನ ಮತ್ತು ಟಾಟಾ ಏಸ್ಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕಾರಿನ ಮುಂಭಾಗ ಜಖಂಗೊಂಡಿದೆ. ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.