ಸಿಎಂ ಪರಿಷ್ಕೃತ ಪ್ರವಾಸದ ವಿವರ, ಚಿತ್ರದುರ್ಗ, ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವೆಂಬರ್ 29ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 9ಕ್ಕೆ ಹೊರಟು 10 ಗಂಟೆಗೆ ಚಿತ್ರದುರ್ಗದ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ ಆವರಣದ ಹೆಲಿಪ್ಯಾಡ್’ಗೆ ತಲುಪುವರು. ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ವತಿಯಿಂದ ಆಯೋಜಿಸಿರುವ ಮುರುಘಾಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯ ಲೋಕಾರ್ಪಣೆ ಹಾಗೂ ಉತ್ತರ ದಿಕ್ಕಿನ ಶಿಲಾಮಂಟಪ ಉದ್ಘಾಟನೆ ಮಾಡಲಿದ್ದಾರೆ.
10.45ಕ್ಕೆ ಅಲ್ಲಿಂದ ಹೊರಟು 11.15ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್’ಗೆ ಬರುವರು. ಬಳಿಕ ಸಹ್ಯಾದ್ರಿ ಕಲಾ ಕಾಲೇಜು, ಸಹ್ಯಾದ್ರಿ ವಾಣಿಜ್ಯ ಮತ್ತುನಿರ್ವಹಣೆ ಕಾಲೇಜು, ಸಹ್ಯಾದ್ರಿ ವಿಜ್ಞಾನ ಕಾಲೇಜು ವತಿಯಿಂದ ಆಯೋಜಿಸಿರುವ ವಿಸ್ತರಣಾ ಕಟ್ಟಡ ದ್ವಾರ ಮತ್ತು ಪುರುಷ ವಿದ್ಯಾರ್ಥಿ ನಿಲಯ ವಿಸ್ತರಣ ಕಟ್ಟಡದ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಪಿಇಎಸ್ ವಿದ್ಯಾಸಂಸ್ಥೆಗಳ ಹಿಂಭಾಗದಲ್ಲಿ ಕಿಮ್ಮನೆ ಗಾಲ್ಪ್ ರೆಸಾರ್ಟ್ ಉದ್ಘಾಟಿಸಲಿದ್ದಾರೆ. ಸಂಜೆ 4ಕ್ಕೆ ಹೆಲಿಕಾಪ್ಟರ್ ಮೂಲಕ ಹೊರಟು 5.20ಕ್ಕೆ ಮೈಸೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!