ಸುದ್ದಿ ಕಣಜ.ಕಾಂ | CITY | MARIKAMBA JATRA
ಶಿವಮೊಗ್ಗ: ನಗರದ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಮಾರ್ಚ್ 22ರಿಂದ ಆರಂಭವಾಗಲಿದ್ದು, ನಗರದಲ್ಲಿ ವಾಹನಗಳ ಸಂಚಾರ ದಟ್ಟಣೆ ತಡೆಯುವ ಉದ್ದೇಶದಿಂದ ಪರ್ಯಾಯ ಮಾರ್ಗಗಳನ್ನು ಸೂಚಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಪರ್ಯಾಯ ಮಾರ್ಗದ ಮಾಹಿತಿ
- ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು, ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶಿಸುವುದು.
- ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು, ಬಸ್ಗಳು ವಿದ್ಯಾನಗರ- ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶಿಸುವುದು.
- ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು, ಬಸ್ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನಸಿರ್ಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶಿಸುವುದು.
- ಸರಕಾರಿ ಮತ್ತು ಖಾಸಗಿ ಬಸ್ ಸ್ಟ್ಯಾಂಡ್ ನಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚಾರ ಮಾಡುವುದು.
READ | ಶಿವಮೊಗ್ಗ-ಭದ್ರಾವತಿ ರಸ್ತೆ ಬಂದ್, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ
ಈ ಮಾರ್ಗಗಳಲ್ಲಿ ಸಂಚಾರ ನಿಷೇಧ
ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧ ಮಾಡಲಾಗುವುದು. ಹೊಳೆ ಬಸ್ ನಿಲ್ದಾಣದಿಂದ ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಎಲ್ಲ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು.
ಮಾ.22ರಂದು ಬೆಳಗ್ಗೆ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್ ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗುವುದು.
ಈ ಎಲ್ಲ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿ ಗಣ್ಯ ವ್ಯಕ್ತಿಗಳ ವಾಹನಗಳು, ಆಂಬ್ಯುಲೆನ್ಸ್ ಹಾಗೂ ಮೂಲಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.