ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ, ಸವದಿ ಚಿತ್ರದುರ್ಗದಲ್ಲಿ ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ
ಚಿತ್ರದುರ್ಗ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ರಾಜಕೀಯ ಮೊಗಸಾಲೆಯಲ್ಲಿ ಈಗ ಬಿಸಿಬಿಸಿ ಚರ್ಚೆಯ ವಿಷಯ ವಸ್ತುವಾಗಿದೆ. ವಿಪಕ್ಷ ನಾಯಕರು ಇದರ ಬಗ್ಗೆ ನಾನಾ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.
ಇವೆಲ್ಲವುಗಳ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಗೆ ಶನಿವಾರ ಭೇಟಿ ನೀಡಿದ್ದ ಡಿಸಿಎಂ ಲಕ್ಷ್ಮಣ್ ಸವದಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ್ದಾರೆ.
ಸಂತೋಷ್ ಅವರಿಗೆ ಭೇಟಿ ಮಾಡಿ ಇಂತಹ ಅನಾಹುತಕ್ಕೆ ಕೈಹಾಕದಂತೆ ಹೇಳುವೆ. ಆಗಿರುವ ಖಿನ್ನತೆ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿರುವ ಮಾತು ಸತ್ಯಕ್ಕೆ ದೂರವಾಗಿದೆ. ಪ್ರಕರಣದ ಮೂಲಕ ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೋ ವಿಡಿಯೋನೂ ಏನೂ ಇಲ್ಲ ಎಂದು ತಿಳಿಸಿದರು.
ವಿಡಿಯೋ ಸುದ್ದಿಗಾಗಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

 

 

Leave a Reply

Your email address will not be published. Required fields are marked *

error: Content is protected !!