ಎಸ್.ಎಸ್.ಎಲ್.ಸಿ. ಪಾಸಾದವರಿಗೆ ಇಲ್ಲಿದೆ ಸುವರ್ಣ ಅವಕಾಶ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ನಿರುದ್ಯೋಗಿ ಯುವಕ, ಯುವತಿಯರಿಗೆ ಶಿಷ್ಯವೇತನ ಸಹಿತ ತರಬೇತಿ ನೀಡಲಾಗುತ್ತಿದೆ.
ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 260 ಗಂಟೆಗಳ ಅವಧಿಯ ಡೊಮೆಸ್ಟಿಕ್ ಡೇಟಾ ಎಂಟ್ರಿ ಆಪರೇಟರ್ ವಿಷಯದಲ್ಲಿ ತರಬೇತಿ ನೀಡಲಾಗುತ್ತಿದೆ.
ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ತರಬೇತಿ ನೀಡುವುದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 2500 ರೂ. ಶಿಷ್ಯವೇತನ ನೀಡಲಾಗುವುದು. ಆಸಕ್ತರು ತಮ್ಮ ವಯಸ್ಸು, ವಿದ್ಯಾರ್ಹತೆ ದಾಖಲಾತಿಗಳು ಹಾಗೂ ವೈಯಕ್ತಿಕ ವಿವರಗಳೊಂದಿಗೆ ಡಿಸೆಂಬರ್ 14ರೊಳಗಾಗಿ ಅರ್ಜಿ ಸಲ್ಲಿಸಬಹುದು. ನಿಗದಿತ ನಮೂನೆಯ ಅರ್ಜಿ ಹಾಗೂ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ನಿದಿಗೆ, ಕೆ.ಐ.ಡಿ.ಬಿ. ಕೈಗಾರಿಕಾ ಪ್ರದೇಶ, ಶಿವಮೊಗ್ಗ ಇಲ್ಲಿಗೆ ಸಂರ್ಕಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-246054, ಮೊ.9141630313, 9945616114ನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

error: Content is protected !!