ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ವಿವಿಧೆಡೆ ಮನೆಗಳಲ್ಲಿ ಕಳ್ಳತನ ಮಾಡುತಿದ್ದ ವ್ಯಕ್ತಿಯನ್ನು ಸಾಗರ ಟೌನ್ ಪೊಲೀಸರು ಬಂಧಿಸಿದ್ದು, ಆತನ ಬಳಿಯಿಂದ ಚಿನ್ನಾಭರಣ, ಬೆಳ್ಳಿಯ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಸೊರಬ ತಾಲ್ಲೂಕಿನ ಉಳುವಿ ಗ್ರಾಮದ ಚಂದ್ರ ಬಳೆಗಾರ್ ಅಲಿಯಾಸ್ ಚಂದ್ರ(28) ಬಂಧಿತ ಆರೋಪಿ. 2 ಕೆಜಿ ತೂಕದ ಬೆಳ್ಳಿಯ ಆಭರಣಗಳು, 10 ಗ್ರಾಂ. ತೂಕದ ಬಂಗಾರದ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
READ | ಬೊಮ್ಮನಕಟ್ಟೆ ಹಂದಿ ಫಾರ್ಮ್ ನಲ್ಲಿ ಕರೆಂಟ್ ಶಾಕ್, ಒಬ್ಬನ ಸಾವು, ಮತ್ತೊಬ್ಬನಿಗೆ ಗಾಯ
ಒಂದು ಕೇಸ್ ಜತೆಯಲ್ಲೇ ಇನ್ನಷ್ಟು ಪ್ರಕರಣ ಬಯಲಿಗೆ
2021ರ ನವೆಂಬರ್ 29ರಂದು ಶಾಂತಿನಗರ ವಾಸಿಯೊಬ್ಬರು ತಮ್ಮ ವಾಸದ ಮನೆಗೆ ಬೀಗವನ್ನು ಹಾಕಿಕೊಂಡು ಹೋಗಿದ್ದಾಗ ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಮನೆಯ ಒಳಗಡೆ ಬೀರುವಿನಲ್ಲಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳು, ಮೊಬೈಲ್ ಅನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ನೀಡಿದ ದೂರನ್ನು ದಾಖಲಿಸಿಕೊಂಡ ಪೊಲೀಸರು ಸಿಪಿಐ ಕಾರ್ಗಲ್ ವೃತ್ತ ಮತ್ತು ಪಿಎಸ್ಐ ಸಾಗರ ಟೌನ್, ಪಿಎಸ್ಐ ಕಾರ್ಗಲ್ ಹಾಗೂ ಸಿಬ್ಬಂದಿ ತಂಡ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಈತನ ವಿರುದ್ಧ ದಾಖಲಾಗಿತ್ತು ಮೂರು ಕೇಸ್
ಸಾಗರ ಟೌನ್ ನಲ್ಲಿ 2 ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ 1 ಮನೆಗಳ್ಳತನ ಮಾಡಿರುವುದಾಗಿ ಆರೋಪಿಯು ಹೇಳಿಕೆ ನೀಡಿದ್ದರಿಂದ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆ ನಂತರ ಮರಳಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.