ಸುದ್ದಿ ಕಣಜ.ಕಾ | DISTRICT | BHOVI SAMAJA
ಶಿವಮೊಗ್ಗ: ನಗರದ ಎನ್.ಇ.ಎಸ್. ಮೈದಾನದಲ್ಲಿ ಜಿಲ್ಲಾ ಭೋವಿ (ವಡ್ಡರ) ಸಮಾಜ ಭಾನುವಾರ ಆಯೋಜಿಸಿದ್ದ ಜಿಲ್ಲಾ ಬೃಹತ್ ಸಮಾವೇಶವು ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ರಾಜಕೀಯ ಘಟಾನುಘಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ, ಪರಸ್ಪರ ಆರೋಪ, ಪ್ರತ್ಯಾರೋಪಗಳೂ ಕೇಳಿಬಂದವು.
READ | ಮುಸುಕಿನ ಜೋಳದ ಬೆಳೆಯಲ್ಲಿ ಸೈನಿಕ ಹುಳುವಿನ ಬಾಧೆ, ಹತೋಟಿ ಕ್ರಮ, ಲಕ್ಷಣಗಳೇನು?
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭೋವಿ ಸಮಾಜಕ್ಕಾಗಿ ಹಲವು ಕಾರ್ಯಕ್ರಮಗಳನ್ನು ನೀಡಿದೆ. ಸಿದ್ದರಾಮೇಶ್ವರ ಜಯಂತಿ ಘೋಷಿಸಿದ್ದು ಕಾಂಗ್ರೆಸ್. ಬಜೆಟ್ ನಲ್ಲಿ ಅನುದಾನ ಕೂಡ ಹೆಚ್ಚಿಸಿತ್ತು. ಗುತ್ತಿಗೆಯಲ್ಲಿ ಮೀಸಲಾತಿ, ಬೋವಿ ಸಮಾಜದವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ. ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸಿತ್ತು. ಇಷ್ಟೆಲ್ಲ ಮಾಡಿದೆ. ಆದರೆ, ಬಿಜೆಪಿಯವರು ಕಳೆದ ನಾಲ್ಕು ವರ್ಷಗಳಿಂದ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿಲ್ಲ.
ಭೋವಿ ಸಮಾಜಕ್ಕೆ ಟಿಕೆಟ್ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಒಂದುವೇಳೆ, ಈಗಲೇ ಘೋಷಿಸಿದರೆ ಬೈಗುಳ ತಿನ್ನಬೇಕಾಗುತ್ತದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ವಡ್ಡರ ಅಭಿವೃದ್ಧಿಗೆ ಕಾಂಗ್ರೆಸ್ ಅವಧಿಯಲ್ಲಿ ಒತ್ತು ನೀಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶಕ್ಕೆ ಬಿಜೆಪಿಯ ಸಿಎಂ ಅಲ್ಲದಿದ್ದರೂ ಜಿಲ್ಲಾ ಮಂತ್ರಿಯಾದರೂ ಬರಬೇಕಿತ್ತು.
ಭೋವಿ ಸಮಾಜ ಇಡೀ ಸಮಾಜಕ್ಕೆ ಬುನಾದಿಯಾಗಿದೆ. ಇವರನ್ನು ಮರೆತರೆ ಬದುಕಿನಲ್ಲಿ ಯಶಸ್ಸು ಗಳಿಸಲು ಸಾÀಧ್ಯವೇ ಇಲ್ಲ.
ಸಂಸದ ಬಿ.ವೈ.ರಾಘವೇಂದ್ರ
ಭೋವಿ ಸಮಾಜದವರು ಸಲ್ಲಿಸಿರುವ ಪ್ರತಿಯೊಂದು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜಾತಿ ಪ್ರಮಾಣ ಪತ್ರ ನೀಡುವುದು, ನಿಗಮಕ್ಕೆ ಅಧ್ಯಕ್ಷರ ನೇಮಕ ಸೇರಿದಂತೆ ಎಲ್ಲವನ್ನೂ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು.
ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಪ್ರಬಲರು ಪರಿಶಿಷ್ಟ ಜಾತಿ ದೃಢೀಕರಣ ಪತ್ರಗಳನ್ನು ಪಡೆಯುತ್ತಿರುವುದನ್ನು ಸರ್ಕಾರ ಕೂಡಲೇ ನಿರ್ಬಂಧಿಸಬೇಕು. ನಕಲಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಇಲ್ಲದಿದ್ದರೆ, ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಸಮಾಜದ ರಾಷ್ಟ್ರೀಯ ಅಧ್ಯಕ್ಷ ರವಿ ಮಾಕಳಿ, ಜಿಲ್ಲಾಧ್ಯಕ್ಷ ಎಸ್.ರವಿಕುಮಾರ್, ಶಾಸಕರಾದ ಎಂ.ಚಂದ್ರಪ್ಪ, ವೆಂಕಟರಮಣಪ್ಪ, ಬಿ.ಕೆ. ಸಂಗಮೇಶ್ವರ್, ಕೆ.ಬಿ.ಅಶೋಕ ನಾಯ್ಕ್, ಭೂರತಿ ಸುರೇಶ್ ಅಖಂಡ ಶ್ರೀನಿವಾಸ್ ಮೂರ್ತಿ, ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಆರ್.ಪ್ರಸನ್ನಕುಮಾರ್, ಮುಖಂಡರಾದ ಆರ್.ಎಂ.ಮಂಜುನಾಥ್ ಗೌಡ, ಎಂ.ಶ್ರೀಕಾಂತ್, ಸಿ.ಎಸ್.ಷಡಕ್ಷರಿ, ಧೀರರಾಜ್ ಹೊನ್ನವಿಲೆ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.