ಭದ್ರಾವತಿಯ ನಾಲ್ವರಿಗೆ ಜೀವಾವಧಿ ಶಿಕ್ಷೆ

Bhadravati taluk

 

 

ಸುದ್ದಿ ಕಣಜ.ಕಾಂ | DISTRICT | COURT NEWS
ಶಿವಮೊಗ್ಗ: ಕೊಲೆ ಪ್ರಕರಣ ಸಂಬಂಧ ನಾಲ್ವರಿಗೆ ಜೀವಾವಧಿ ಶಿಕ್ಷೆ ಮತ್ತು ₹20,000 ದಂಡ ವಿಧಿಸಿ 4ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ಪೀಠಾಸೀನ ಭದ್ರಾವತಿಯಲ್ಲಿ ನ್ಯಾಯಾಧೀಶ ಶಶಿಧರ್ ಗುರುವಾರ ತೀರ್ಪು ನೀಡಿದ್ದಾರೆ.
ಭದ್ರಾವತಿಯ ಚಿಕ್ಕನಕಟ್ಟೆ ಗ್ರಾಮದ ಮಂಜುನಾಥ(26), ದಾನವಾಡಿಯ ಕವಿತಾ (35), ರಾಮನಕಟ್ಟೆಯ ರೂಪಾ(32), ಚಿಕ್ಕನಕಟ್ಟೆಯ ಅಂಬರೀಶ್(21) ಅವರು ಶಿಕ್ಷೆಗೆ ಗುರಿಯಾದವರು.
ಪ್ರಕರಣದ ಹಿನ್ನೆಲೆ
2015ರ ಮಾರ್ಚ್ 25ರಂದು ಅಪರಾಧಿಗಳು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ದಾನವಾಡಿ ಗ್ರಾಮದ ವಾಸಿಯಾದ ಹರೀಆ್ (23) ಈತನೊಂದಿಗೆ ಜಮೀನಿನ ವಿಚಾರವಾಗಿ ಜಗಳ ತೆಗೆದು ಮಂಜುನಾಥನು ಹರೀಶನ ಎದೆಗೆ ಚಾಕುವಿನಿಂದ ಹಲ್ಲೆ ಮಾಡಿದ್ದ. ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಗೆ ಸೇರಿಸಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ನಂತರ ಏಪ್ರಿಲ್‌ ರಂದು ಹರೀಶನು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ.‌ ಆಗಿನ ತನಿಖಾಧಿಕಾರಿ ಭದ್ರಾವತಿ ಗ್ರಾಮಾಂತರ ಠಾಣೆ ಪಿಐ ರಮೇಶ್ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ಜಾರ್ಜ್ ಶೀಟ್ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ‌ ನ್ಯಾಯಾಧೀಶರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು. ಎಲ್ಲ ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ಮತ್ತು ₹20,000 ದಂಡ, ದಂಡವನ್ನು ಕಟ್ಟಲು ವಿಫಲರಾದರೆ ಹೆಚ್ಚುವರಿಯಾಗಿ 2 ವರ್ಷ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶಿಸಲಾಗಿದೆ.

https://suddikanaja.com/2021/12/30/a-man-convicted-of-murdering-a-juice-shop-owner-in-shiralakoppa-has-been-sentenced-to-life-imprisonment-and-fined-%e2%82%b9-50000/

Leave a Reply

Your email address will not be published. Required fields are marked *

error: Content is protected !!