ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಎಸಿಬಿ ದಾಳಿ, ಅಧಿಕಾರಿಗಳಿಗೆ ಶಾಕ್

ACB

 

 

ಸುದ್ದಿ ಕಣಜ.ಕಾಂ‌ | DISTRICT | ACB RAID
ಶಿವಮೊಗ್ಗ: ರಾಜ್ಯದಾದ್ಯಂತ ಶುಕ್ರವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ(ACB) ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಶಾಕ್ ನೀಡಿದೆ. 21 ಅಧಿಕಾರಿಗಳ‌ ನೇತೃತ್ವದಲ್ಲಿ ಶಿವಮೊಗ್ಗದ ಎಲ್.ಬಿ.ಎಸ್.ನಗರದಲ್ಲೂ ದಾಳಿ ನಡೆದಿದೆ.
ಬೆಂಗಳೂರಿನ‌ ಡೆಪ್ಯೂಟಿ ಚೀಫ್ ಎಲೆಕ್ಟ್ರಾನಿಕಲ್ ಆಫಿಸರ್ ವೊಬ್ಬರ ಶಿವಮೊಗ್ಗದ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುತಿದ್ದಾರೆ.

READ | ಒಂದೇ ವರ್ಷ 2 ಘಟಿಕೋತ್ಸವಗಳಿಗೆ ಸಾಕ್ಷಿಯಾದ ಕುವೆಂಪು ವಿವಿ, ‘ಚಿನ್ನ’ದ ಹುಡುಗಿಯರ ಮಾತುಗಳಿವು…

80 ಕಡೆ ಏಕಾಏಕಿ ದಾಳಿ
ರಾಜ್ಯದ 80 ಕಡೆಗಳಲ್ಲಿ ಏಕಾಏಕಿ ಎಸಿಬಿ‌ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 300ಕ್ಕೂ ಅಧಿಕ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ರಾಜ್ಯದ 21 ಸರ್ಕಾರಿ‌ ಅಧಿಕಾರಿಗಳ ಮೇಲೆ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ‌ ದಾಳಿ ನಡೆಸಲಾಗಿದೆ. ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!