ಸುದ್ದಿ ಕಣಜ.ಕಾಂ | DISTRICT | AGUMBE GHAT
ಶಿವಮೊಗ್ಗ: ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.
ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು.
READ | ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ
ಪರ್ಯಾಯ ಮಾರ್ಗ
ತೀರ್ಥಹಳ್ಳಿ- ಕೊಪ್ಪ- ಶೃಂಗೇರಿ- ಕಾರ್ಕಳ- ಮಂಗಳೂರು, ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಕಾರ್ಕಳ- ಮಂಗಳೂರು, ತೀರ್ಥಹಳ್ಳಿ- ಮಾಸ್ತಿಕಟ್ಟೆ- ಕುಂದಾಪುರ ಮಾರ್ಗವನ್ನು ವಾಹನ ಸಂಚಾರಕ್ಕೆ ಬಳಸುವಂತೆ ತಿಳಿಸಿದ್ದಾರೆ.