ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇಲ್ಲಿ ದಿನ ಬೆಳಗಾದರೆ ಕೋವಿಡ್ ಟೆಸ್ಟ್ ಗಾಗಿ ಗಂಟಲು ದ್ರವದ ಮಾದರಿ ನೀಡಲು ಸರದಿಯಲ್ಲಿ ನಿಲ್ಲಬೇಕು. ಬೆಳಗ್ಗೆ ನಿಂತರೆ ಮಧ್ಯಾಹ್ನದವರೆಗೂ ತಮ್ಮ ಸರದಿ ಬರುವುದು ಕಷ್ಟಸಾಧ್ಯ.
ಈ ಬಗ್ಗೆ ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ.ಯೋಗೇಶ್ ಅವರು, ಡಿಎಚ್ಒ ಡಾ.ರಾಜೇಶ್ ಸುರಗೀಹಳ್ಳಿ ಅವರಿಗೆ ಈ ಕುರಿತು ಶುಕ್ರವಾರ ಮನವಿ ಪತ್ರ ಸಲ್ಲಿಸಿದ್ದು, ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.