ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು, ಶಿಸ್ತು ರೂಢಿಸಲು, ಕಾನೂನಿನ ಬಗ್ಗೆ ಗೌರವ ಹೆಚ್ಚಿಸುವ ಮತ್ತು ಅರಿವು ಮೂಡಿಸುವ ಸಲುವಾಗಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ (Student Police Cadet) ಯೋಜನೆಯನ್ನು ಪೊಲೀಸ್ ಇಲಾಖಾ ವತಿಯಿಂದ ಅನುಷ್ಠಾನ ಮಾಡಲಾಗುತ್ತಿದೆ. ಇದಕ್ಕಾಗಿ ಶಿವಮೊಗ್ಗ ಜಿಲ್ಲೆಯ 25 ಶಾಲೆಗಳನ್ನು ಗುರುತಿಸಲಾಗಿದೆ.
READ | ಚಿನ್ನಾಭರಣ ಪ್ರಿಯರಿಗೆ ಶಾಕ್, ಸತತ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಮಿಥುನ್ ಕುಮಾರ್ ಅವರು ಯೋಜನೆಯನ್ನು ಶಿರಾಳಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿದರು.
ಯಾವ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು?
ಸಮಾಜದಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮತ್ತು ಕರ್ತವ್ಯಗಳು ಹಾಗೂ ಪೊಲೀಸಿಂಗ್ ನಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾಹಿತಿ ನೀಡಲಾಯಿತು.
ಸಾಮಾಜಿಕ ಪಿಡುಗುಗಳು ಮತ್ತು ಅವುಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು. ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆ, ಅಪಘಾತಕ್ಕೆ ಕಾರಣಗಳು ಮತ್ತು ತೆಡಗಟ್ಟುವಿಕೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಮಾಹಿತಿ ನೀಡಿದರು.
ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಹಾಗೂ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡುವುದು, ಪ್ರಾಕೃತಿಕ ವಿಕೋಪಗಳ ನಿರ್ವಹಣೆ, ಪರೇಡ್ (ಕವಾಯತು), ಯೋಗಾಭ್ಯಾಸ, ಪೆÇಲೀಸ್ ಠಾಣೆಯ ಕಾರ್ಯವೈಖರಿಗಳ ಬಗ್ಗೆ ತಿಳಿಸಲು ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಗಳ ಭೇಟಿ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು.