ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗದಲ್ಲಿ ಇತ್ತೀಚೆಗೆ ತುಂಗಾ ದಡದ ತೀರದಲ್ಲಿ ನಡೆದ ಪ್ರಾಯೋಗಿಕ ಸ್ಫೋಟ(trail blast)ಕ್ಕೂ ಮಂಗಳೂರಿನ ಆಟೋವೊಂದರಲ್ಲಿ ನಡೆದ ಕುಕ್ಕರ್ ಸ್ಫೋಟಕ್ಕೂ ಸಂಬಂಧವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
READ | ಏಳನೇ ವೇತನ ಆಯೋಗಕ್ಕೆ ಆರ್ಥಿಕ ಇಲಾಖೆ ಅಸ್ತು, ಸಿ.ಎಸ್.ಷಡಾಕ್ಷರಿ ಹೇಳಿದ್ದೇನು? ಹೇಗಿರಲಿದೆ ಆಯೋಗದ ಕಾರ್ಯನಿರ್ವಹಣೆ?
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ತೀರ್ಥಹಳ್ಳಿಯ ಹಲವೆಡೆ ದಾಳಿ ನಡೆಸಿದ್ದಾರೆ. ಸ್ಫೋಟ ಪ್ರಕರಣದ ಆರೋಪ ಶಾರೀಕ್ ಮೈಸೂರು, ಹುಬ್ಬಳ್ಳಿಯಲ್ಲೂ ವಾಸವಾಗಿದ್ದ. ಇನ್ನಷ್ಟು ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದರು.