ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಹಿರಿಯ ನಾಗರಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ (GK Mithun kumar)ಅವರು ಹಲವು ಸಲಹೆಗಳನ್ನು ನೀಡಿದ್ದಾರೆ.
ಜಿಲ್ಲೆ ಆಯಾ ಪೊಲೀಸ್ ಠಾಣೆಗಳಲ್ಲಿ ಶನಿವಾರ ಕರೆದಿದ್ದ ಹಿರಿಯ ನಾಗರಿಕರ ಕುಂದು ಕೊರತೆ ಸಭೆಯನ್ನು ನಡೆಸಿ, ಅವರುಗಳ ಸಮಸ್ಯೆಗಳನ್ನು ಆಲಿಸಿ ಈ ಕೆಳಕಂಡ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರ ಮಾಹಿತಿ ಮತ್ತು ದೂರವಾಣಿ ಸಂಖ್ಯೆಗಳನ್ನು ರಿಜಿಸ್ಟರ್ ನಲ್ಲಿ ನಮೂದಿಸಿಕೊಂಡು, ಸಂಬಂದಪಟ್ಟ ಬೀಟ್ ಸಿಬ್ಬಂದಿ ದೂರವಾಣಿ ಸಂಖ್ಯೆಗಳನ್ನು ಅವರುಗಳಿಗೆ ನೀಡಲಾಯಿತು.
ಬೀಟ್ ಸಿಬ್ಬಂದಿ ತಿಂಗಳಲ್ಲಿ ಕನಿಷ್ಠ ಒಂದು ಬಾರಿ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿಲಿದ್ದು, ಈ ಸಂದರ್ಭದಲ್ಲಿ ಕುಂದುಕೊರತೆಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.
ಸರ್ಕಾರದಿಂದ ಹಿರಿಯ ನಾಗರಿಕರಿಗಿರುವ ಸೌಲಭ್ಯಗಳು ಮತ್ತು Maintenance and Welfare of Parents and Senior Citizen Act 2007 ಕುರಿತಂತೆ ಮಾಹಿತಿಯನ್ನು ನೀಡಲಾಯಿತು.
ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ಸೂಚನೆ
- ಪೊಲೀಸ್ ಠಾಣೆಗಳಿಗೆ ಬರುವ ಹಿರಿಯ ನಾಗರಿಕರ ಯಾವುದೇ ಕುಂದು ಕೊರತೆ / ದೂರುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ನೀಡಲಾಗುವುದು.
- ಹಿರಿಯ ನಾಗರಿಕರ ಮನೆಗೆಲಸದವರನ್ನು ಮಾಡಿಕೊಳ್ಳುವಾಗ ಅವರುಗಳ ಪೂರ್ವಾಪರವನ್ನು ಪರಿಶೀಲನೆ ಮಾಡಿ ನೇಮಕ ಮಾಡಿಕೊಳ್ಳುವುದು. ಪರಿಶೀಲನೆಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಿದಾಗ ತ್ವರಿತಗತಿಯಲ್ಲಿ ಪರಿಶೀಲನೆ ಮಾಡಿ ವರದಿಯನ್ನು ನೀಡಲಾಗುವುದು.
- ಒಂಟಿಯಾಗಿ ವಾಸವಾಗಿರುವ ಹಿರಿಯ ನಾಗರಿಕರು ತಮ್ಮ ಮನೆಗಳನ್ನು ಬಾಡಿಗೆಗೆ ನೀಡುವಾಗ ಬಾಡಿಗೆದಾರರ ಪೂರ್ವಾಪರವನ್ನು ಪರಿಶೀಲಿಸಿ, ಅವರುಗಳು ನೀಡುವ ಮಾಹಿತಿಯನ್ನು ದೃಢಪಟಿಸಿಕೊಂಡ ನಂತರವೇ ಬಾಡಿಗೆಗೆ ನೀಡುವುದು.
- ಹಿರಿಯ ನಾಗರಿಕರು ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ವಾಯುವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಅಥವಾ ಯಾರೇ ವ್ಯಕ್ತಿಗಳು ತೊಂದರೆ ನೀಡುತ್ತಿದ್ದಲ್ಲಿ ಅಥವಾ ತುರ್ತು ಪರಿಸ್ಥಿತಿಯಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆಗೆ ಅಥವಾ 112 ಸಹಾಯವಾಣಿಗೆ ಕರೆ ಮಾಡುವುದು.
READ | ಮನೆ ಬಾಡಿಗೆ ನೀಡುವ ಬಗ್ಗೆ ಶಿವಮೊಗ್ಗ ಪೊಲೀಸರಿಂದ ಮಹತ್ವದ ಸೂಚನೆ