Arrest | ಮನೆ ಬಾಗಿಲು ಮುರಿದು ಕಳ್ಳತನ ಪ್ರಕರಣ, ಜಂಗ್ಲಿ ಗ್ಯಾಂಗ್ ಅರೆಸ್ಟ್

arrest

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇತ್ತೀಚೆಗೆ ಅಗಸವಳ್ಳಿ ಗ್ರಾಮದ ಮನೆಯೊಂದರ ಬಾಗಿಲು ಮುರಿದು ಕಳ್ಳತನ ಮಾಡಿದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

READ | ಈಯರ್ ಬಡ್ಸ್ ಸೇರಿದಂತೆ 15ಕ್ಕೂ ಹೆಚ್ಚು ಸಾಮಗ್ರಿಗಳಲ್ಲಿ ಪ್ಲಾಸ್ಟಿಕ್ ಬ್ಯಾನ್!

ಹೊಳೆಹೊನ್ನೂರಿನ ಕಾಳಿಕಾನಗರದ ಜೆ.ಮಂಜುನಾಥ್ ಅಲಿಯಾಸ್ ಜಂಗ್ಲಿ ಮಂಜ(31), ಆರ್.ಅರುಣ್ (18), ಜಾವಳ್ಳಿಯ ಅಶೋಕ್ (19), ಪಿಳ್ಳಂಗೇರಿಯ ಮೊಹಮ್ಮದ್ ಸುಹೇಲ್ ಅಲಿಯಾಸ್ ಟುಯ್ಯಿ(28) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಪ್ರಕರಣಕ್ಕೆ ಸಂಬಂಧಿಸಿದ 11,52,000 ರೂ. ನಗದು ಹಣ, ಅಂದಾಜು ಮೌಲ್ಯ 1.50 ಲಕ್ಷ ರೂ.ಗಳ 30 ಗ್ರಾಂ. ಬಂಗಾರದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಬೇಧಿಸಿದ ತಂಡ
ಮನೆಯ ಬಾಗಿಲನ್ನು ಮುರಿದು ಬೀರುವಿನಲ್ಲಿದ್ದ ಬಂಗಾರದ ಆಭರಣ ಮತ್ತು ನಗದು ಹಣವನ್ನು ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಖಲಿಕೊಂಡ ತುಂಗಾನಗರ ಪೊಲೀಸ್ ಠಾಣೆಯ ಪಿಐ, ಪಿಎಸ್.ಐ ಹಾಗೂ ಸಿಬ್ಬಂದಿ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದೆ.

https://suddikanaja.com/2022/12/11/lorry-car-accident-near-kallapura-3-students-died/

 

error: Content is protected !!