ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಹಳ ವರ್ಷಗಳ ನಂತರ ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಸಮಿತಿ ಸಭೆ ನಡೆಯಲಿದೆ. ಇದು ಪಕ್ಷಕ್ಕೆ ಬಹುದೊಡ್ಡ ತಿರುವು ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಜನವರಿ 2 ಮತ್ತು 3ರಂದು ಪೆಸಿಟ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಇದು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳ ಮಾರ್ಗಸೂಚಿ ಆಗಲಿದೆ ಎಂದು ತಿಳಿಸಿದರು.
ಎಪಿಎಂಸಿ ಅನಿರ್ದಿಷ್ಟಾವಧಿ ಬಂದ್ ಎಚ್ಚರಿಕೆ, ಅಡಿಕೆ ಮಾರಾಟ ಸ್ಥಗಿತಕ್ಕೆ ಕಾರಣವೇನು?
ಸಭೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಜತೆಗೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ರಾಜ್ಯ ಹಾಗೂ ಜಿಲ್ಲೆಯ ಬಿಜೆಪಿ ಮುಖಂಡರು ಸೇರಿ ಒಟ್ಟು 200 ಜನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಗ್ರಾಪಂ ಚುನಾವಣೆ, ಹೇಗಿತ್ತು ಮಸ್ಟರಿಂಗ್, ಕಲ್ಪಿಸಿದ್ದ ಸೌಲಭ್ಯಗಳೇನು? ಆದ ಗೊಂದಲಗಳೇನು?
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ಎಂ.ಬಿ.ಭಾನುಪ್ರಕಾಶ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಸಹ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಕೆಎಸ್ಎಸ್ಐಡಿಸಿ ಉಪಾಧ್ಯಕ್ಷ ಎಸ್.ದತ್ತಾತ್ರಿ, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಉಪಸ್ಥಿತರಿದ್ದರು.