ಸುದ್ದಿ ಕಣಜ.ಕಾಂ ಬೆಂಗಳೂರು: ಗುರುವಾರ ರಾತ್ರಿಯಿಂದ ಜಾರಿಯಾಗಬೇಕಿದ್ದ ರಾತ್ರಿ ಕಫ್ರ್ಯೂ ಅನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಅಭಿಪ್ರಾಯ ಹಿನ್ನೆಲೆ ಕಫ್ರ್ಯೂ ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.
ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರದ ಕೊರೊನಾ ವೈರಸ್ ಹರಡುವಿಕೆ ತಡೆಗೆ ತಜ್ಞರ ಸಲಹೆಯಂತೆ ನೈಟ್ ಕಫ್ರ್ಯೂ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂ ಅಗತ್ಯ ಇಲ್ಲವೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ, ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮನಗಂಡು ಕಫ್ರ್ಯೂ ಕೈಬಿಡಲಾಗಿದೆ.
ಸ್ವಯಂ ನಿರ್ಬಂಧಕ್ಕೆ ಮನವಿ: ಕೊರೊನಾ ವಿರುದ್ಧ ಜಯಿಸಲು ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಸುದ್ದಿ ಕಣಜ.ಕಾಂ | TALUK | SIGANDUR LAUNCH ತುಮರಿ(ಸಾಗರ): ಕರ್ನಾಟಕದ ಅಂಡಮಾನ್ ಎಂದೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಶರಾವತಿ ಹಿನ್ನೀರಿನ ಹೊಳೆಬಾಗಿಲಿನಲ್ಲಿ ದಸರಾ ಆಯುಧ ಪೂಜೆಯ ಅಂಗವಾಗಿ ಹೊಳೆಬಾಗಿಲಿನ ಲಾಂಚ್ ಮದುವಣಗಿತ್ತಿಯಂತೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಾನಗರ ರಸ್ತೆಯಲ್ಲಿ ಸುಸ್ತಾದಂತೆ ಬಿದ್ದಿದ್ದ ಸುಮಾರು 70 – 75 ವರ್ಷದ ಅಪರಿಚಿತ ಅನಾಮದೇಯ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ […]
ಸುದ್ದಿ ಕಣಜ.ಕಾಂ | SHIMOGA CITY | 28 OCT 2022 ಶಿವಮೊಗ್ಗ(Shivamogga): ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ (Mayor) ಮತ್ತು ಉಪ ಮೇಯರ್ (deputy mayor) ಸ್ಥಾನಗಳಿಗೆ ಅಕ್ಟೋಬರ್ 28ರಂದು ಮಧ್ಯಾಹ್ನ […]