ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನೀರಾವರಿ ಇಲಾಖೆಯ ಇಇ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತಪಡಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.
ವಿಜಯನಗರದ ಎರಡನೇ ಕ್ರಾಸ್ ನಿವಾಸಿ ಕಮಲಮ್ಮ (57) ಎಂಬುವವರು ಮೃತಪಟ್ಟಿದ್ದು, ಮನೆಯಲ್ಲೇ ಇವರು ಮೃತಪಟ್ಟಿದ್ದಾರೆ.
ಪತಿ ಗೋವಾಗೆ ಹೋದಾಗ ಘಟನೆ
ಪತಿ ಮಲ್ಲಿಕಾರ್ಜುನ್ ಅವರು ಗೋವಾಕ್ಕೆ ಸ್ನೇಹಿತರೊಂದಿಗೆ ಹೋದಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಲ್ಲಿಕಾರ್ಜುನ್ ಅವರು ಹೊಸದುರ್ಗದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಪ್ರವಾಸಕ್ಕೆ ತೆರಳಿದ್ದ ಪತಿಯು ಪತ್ನಿಗೆ ಕರೆ ಮಾಡಿದರೂ ಪ್ರತಿಕ್ರಿಯೆ ನೀಡಿಲ್ಲ. ಆಗ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಕದ ಮನೆಯವರು ಹೋಗಿ ನೋಡಿದಾಗ ಮಹಿಳೆ ಮೃತಪಟ್ಟ ವಿಚಾರ ಗೊತ್ತಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ದಾವಣಗೆರೆಯಿಂದ ವಿಧಿವಿಜ್ಞಾನ ಪ್ರಯೋಗಲಯ ಅಧಿಕಾರಿಗಳು ಮತ್ತು ಪೊಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.