ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
17 ದ್ವಿಚಕ್ರ ವಾಹನ ಸೀಜ್, ಯಾವ ಠಾಣೆಗಳಲ್ಲಿ ದೂರು?
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬೈಕ್’ಗಳ ಕಳವು ಪ್ರಕರಣ ತನಿಖೆ ಕೈಗೊಂಡ ತಂಡವು ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದಿದೆ.
ಆತನಿಂದ ದೊಡ್ಡಪೇಟೆ ಪೊಲೀಸ್ ಠಾಣೆಯ 4, ಸಾಗರ ಟೌನ್ ಪೊಲೀಸ್ ಠಾಣೆಯ 1, ಸಖರಾಯಪಟ್ಟಣ ಪೊಲೀಸ್ ಠಾಣೆಯ 1, ರಾಮನಗರ ಟೌನ್ ಪೊಲೀಸ್ ಠಾಣೆಯ 1, ದಾವಣಗೆರೆಯ 4, ಹೊನ್ನಾಳಿಯ 1, ಭದ್ರಾವತಿಯ 1, ಬೈಸೂರಿನ 1, ತಿಪಟೂರಿನ 1, ಹಾಸನದ 1 ಮತ್ತು ಹರಪನಹಳ್ಳಿಯ 1 ಪ್ರಕರಣ ಸೇರಿದಂತೆ ಒಟ್ಟು 17 ದ್ವಿ ಚಕ್ರವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ₹10,55,000 ಮೌಲ್ಯದ ಒಟ್ಟು 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
READ | ನೂರಡಿ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್, ಮೂವರಿಗೆ ಬಿತ್ತು ದಂಡ
ಪ್ರಕರಣ ಬೇಧಿಸಿದ ತನಿಖಾ ತಂಡ
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಕಳವಾದ ಬೈಕ್ ಗಳು ಮತ್ತು ಆರೋಪಿತರ ಪತ್ತೆಗಾಗಿ ಎಸ್.ಪಿ. ಜಿ.ಕೆ. ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ಶಿವಮೊಗ್ಗ ಬಿ ಉಪ ವಿಭಾಗದ ಬಿ.ಬಾಲರಾಜ್, ಶಿವಮೊಗ್ಗ ಎ ಉಪ ವಿಭಾಗ ಮೇಲ್ವಿಚಾರಣೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಕುಮಾರ್ ನೇತೃತ್ವದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್ಐಗಳಾದ ಶ್ರೀನಿವಾಸ್, ತಿಮ್ಮಪ್ಪ, ಸಿಬ್ಬಂದಿ ಪಾಲಾಕ್ಷ ನಾಯ್ಕ್, ಚಂದ್ರ ನಾಯ್ಕ್, ಚಂದ್ರಾನಾಯ್ಕ್, ಹೇಮಂತ್, ಪುನೀತ್, ಮನೋಹರ್, ನಿತಿನ್ ಮತ್ತು ಸುಮಿತ್ರಾ ಬಾಯಿ ಅವರುಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ ಆರೋಪಿಯನ್ನು ವಶಕ್ಕೆ ವಶಕ್ಕೆ ಪಡೆದಿದೆ.