ಸುದ್ದಿ ಕಣಜ.ಕಾಂ
ಶಿವಮೊಗ್ಗ: 2020-21ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ತೆರೆಯಲಾಗಿದೆ.
ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣೆ ವಿಭಾಗ ಮತ್ತು ಉಪ ವಿಭಾಗವು ಜನವರಿ 10ರಂದು ಕೌಂಟರ್ಗಳನ್ನು ತೆರೆಯಲಿದೆ.
ಎಲ್ಲೆಲ್ಲಿ ಕೌಂಟರ್: ಕಲ್ಲಹಳ್ಳಿ ಗಣಪತಿ ದೇವಸ್ಥಾನ, ಟ್ಯಾಂಕ್ ಮೊಹಲ್ಲಾ ರಾಮಮಂದಿರ ಪಾರ್ಕ್, ಬಸವನಗುಡಿ ಸರ್ವೋದಯ ಶಾಲೆ ಆವರಣ, ಎಲ್.ಬಿ.ಎಸ್.ನಗರ ವಿಜಯಾ ಬ್ಯಾಂಕ್ ಹತ್ತಿರ ವಿಶೇಷ ಕಂದಾಯ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗಿದೆ.
ಕಂದಾಯ ಕಟ್ಟದಿದ್ದರೆ ಕನೆಕ್ಷನ್ ಕಟ್: ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.