ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜನವರಿ 23ರಂದು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿದ್ಧಾರೂಢ ನಗರದ ಬಸವೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಸಾಹಿತ್ಯ ಸಮ್ಮೇಳನ ಸಂಬಂಧಪಟ್ಟಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎ.ಪಿ.ಕುಮಾರ್ ಅವರು ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಸಾಪ ಅಧ್ಯಕ್ಷ ಅಪೇಕ್ಷಾ ಮಂಜುನಾಥ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮಗಳೇನು?
- ಬೆಳಗ್ಗೆ 8 ಗಂಟೆಗೆ ತಹಸೀಲ್ದಾರ್ ಸಂತೋಷ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ, ನಾಡಧ್ವಜ ಹಾಗೂ ಪರಿಷತ್ ಧ್ವಜಾರೋಹಣ ನೆರವೇರಲಿದೆ.
- ಬೆಳಗ್ಗೆ 9 ಗಂಟೆಗೆ ತಾಲೂಕು ಪಂಚಾಯಿತಿ ಇಒ ಡಾ.ಎಸ್.ಮಂಜುನಾಥ್ ಅವರು ಸರ್ವಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
- 10.30 ಗಂಟೆಗೆ ಅಖಿಲ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೋ.ರು.ಚನ್ನಬಸಪ್ಪ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.
- ಮಧ್ಯಾಹ್ನ 12 ಗಂಟೆಗೆ ಕವಿಗೋಷ್ಠಿ, 1 ಗಂಟೆಯ ಬಳಿಕ ಅಂತರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸ್ಯಾಕ್ಸೋಫೋನ್ ಮತ್ತು ಕೊಳಲು ವಾದಕ ಸಂದೀಪ್ ವಸಿಷ್ಠ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
- ಮಧ್ಯಾಹ್ನ 2.45 ಗಂಟೆಗೆ ಗೋಷ್ಠಿ, ವಿಚಾರ ಮಂಥನ ಏರ್ಪಡಿಸಲಾಗಿದೆ.
- ಸಂಜೆ 5 ಗಂಟೆಗೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ ಶಾಸಕ ಬಿ.ಕೆ.ಸಂಗಮೇಶ್ವರ್, ಸರ್ವಾಧ್ಯಕ್ಷ ಎ.ಪಿ.ಕುಮಾರ್, ಉಪ ವಿಭಾಗ ಅಧಿಕಾರಿ ಟಿ.ವಿ.ಪ್ರಕಾಶ್ ಭಾಗವಹಿಸಲಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಕಸಾಪ ಉಪಾಧ್ಯಕ್ಷ ಎಚ್.ಎನ್.ಮಹಾರುದ್ರ, ಪದಾಧಿಕಾರಿ ಸಿ.ಚೆನ್ನಪ್ಪ, ಜಿ.ಎಸ್.ಸತ್ಯಮೂರ್ತಿ, ವೈ.ಕೆ.ಹನುಮಂತಪ್ಪ ಉಪಸ್ಥಿತರಿದ್ದರು.