ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರ ಸೇರಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಿದೆ. ಇದರಿಂದ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನ ಸವಾರರು ಬೈಕ್ ನೊಂದಿಗೆ ಛತ್ರಿಯನ್ನೂ ಹಿಡಿದು ಸಂಚರಿಸುವುದು ನಗರದಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿದೆ.
ಛತ್ರಿ ಹಿಡಿದುಕೊಂಡು ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಅಪಘಾತಗಳಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ಎಚ್ಚರಿಕೆ ವಹಿಸಬೇಕೆಂದು ಸಂಚಾರ ಪೊಲೀಸರು ವಾಹನ ಸವಾರರಿಗೆ ತಡೆದು ಮಾಹಿತಿ ನೀಡಿದರು.