ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ಅದರಲ್ಲೂ ಮಲೆನಾಡಿನ ತಾಲೂಕುಗಳಲ್ಲಿ ಭಾರಿ ವರ್ಷಧಾರೆ ಆಗುತ್ತಿದೆ. ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಸ್ಥಳೀಯ ಆಡಳಿತ ರಜೆ ನೀಡಿ ಆದೇಶಿಸಿದೆ.
READ | ಇವರಿಗೆ ದೇವಸ್ಥಾನಗಳೇ ಟಾರ್ಗೆಟ್, ಮೂರು ಟೆಂಪಲ್ ಗಳಿಗೆ ಕನ್ನ ಹಾಕಿದವರು ಅರೆಸ್ಟ್
ಸೊರಬ, ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.27ರಂದು ರಜೆ ಘೋಷಿಸಲಾಗಿದೆ.
ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್
ಜು.27ರಂದು ರಾಜ್ಯದ ವಿವಿಧೆಡೆ ಆರಂಜ್ ಅಲರ್ಟ್ ಘೋಷಿಸಲಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಆರೆಂಜ್ ಅಲರ್ಟ್ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.