ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣ ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಕೋಲಾಹಲವನ್ನೇ ಸೃಷ್ಟಿಸಿತು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿದರೆ, ಆಡಳಿತರೂಢ ಬಿಜೆಪಿ ನೇತೃತ್ವದ ಸರ್ಕಾರ ಕಂದಾಯ ಆಯುಕ್ತರಿಂದ ತನಿಖೆಗೆ ನಡೆಸುವುದಾಗಿ ಘೋಷಿಸಿತು. ಇದರಿಂದಾಗಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭಾತ್ಯಾಗ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರೇ ಆರೋಪಿಸಿರುವಂತೆ ಸ್ಫೋಟ ಪ್ರಕರಣದಲ್ಲಿ ರಾಜಕಾರಣಿಗಳು ಶಾಮೀಲು ಆಗಿದ್ದಾರೆ. ಹೀಗಾಗಿ, ನ್ಯಾಯಾಂಗ ತನಿಖೆ ನಡೆಸಬೇಕು.
– ಸಿದ್ದರಾಮಯ್ಯ, ವಿಧಾನ ಸಭೆ ವಿರೋಧ ಪಕ್ಷ ನಾಯಕಆಂಧ್ರದಿಂದ ಭಾರಿ ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ಶಿವಮೊಗ್ಗಕ್ಕೆ ತರಲಾಗಿದೆ. ಆದರೆ, ಯಾವುದೇ ಚೆಕ್ ಪೋಸ್ಟ್ ಗಳಲ್ಲಿ ಅವರನ್ನು ಹಿಡಿಯಲಾಗಿಲ್ಲ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಪರಿಸ್ಥೀತಿ ಹೀಗಿದ್ದರೆ ಉಳಿದೆಡೆ ಹೇಗಿರಬಹುದು.
– ಎಸ್.ಆರ್.ಪಾಟೀಲ್, ಪರಿಷತ್ ವಿರೋಧ ಪಕ್ಷ ನಾಯಕ
ಬಳಿಕ ಮಾತನಾಡಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗುವುದು. ಸ್ಫೋಟಕ ಅಕ್ರಮ ಪೂರೈಕೆ ಮೂಲ ಪತ್ತೆ ಹಚ್ಚಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.
ತಪ್ಪಿತಸ್ಥ ಸ್ಥಾನದಲ್ಲಿ ಡಿಸಿ | ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳೇ ತಪ್ಪಿತಸ್ಥ ಸ್ಥಾನದಲ್ಲಿ ಇರುವುದಾಗಿ ವಿರೋಧ ಪಕ್ಷಗಳು ಆರೋಪಿವೆ. ಹೀಗಾಗಿ, ಕಂದಾಯ ಇಲಾಖೆ ಆಯುಕ್ತರಿಂದ ತನಿಖೆ ನಡೆಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.