ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕಳೆದೆರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಿನೋಬನಗರ ಪೊಲೀಸರು ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ.
ಶಿವಮೊಗ್ಗ ನಗರದ ನಿವಾಸಿ ವೆಂಕಟೇಶ್ ಅಲಿಯಾಸ್ ಟಿಂಗು(32) ಬಂಧಿತ ಆರೋಪಿ. ಈತನ ವಿರುದ್ಧ ವಿನೋಬನಗರ ಠಾಣೆಯಲ್ಲಿ ಐಪಿಸಿ 457, 380 ಅಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿ ವಿರುದ್ದ ದಸ್ತಗಿರಿ ವಾರೆಂಟ್ ಹೊರಡಿಸಿದೆ.
ಪತ್ತೆಗಾಗಿ ವಿನೋಬನಗರ ಪೊಲೀಸ್ ಠಾಣೆಯ ಪಿ.ಎಸ್. ಐ ಉಮೇಶ್ ಕುಮಾರ್ ಅವರು ಠಾಣೆ ಹೆಡ್ ಕಾನ್ಸ್ ಟೆಬಲ್ ಮಂಜುನಾಥ್ ಅವರನ್ನು ಕರ್ತವ್ಯಕ್ಕೆ ನೇಮಕ ಮಾಡಿದ್ದು, ಇವರು ಆರೋಪಿಯನ್ನು ಬಂಧಿಸಿದ್ದಾರೆ.