ಸುದ್ದಿ ಕಣಜ.ಕಾಂ
ಶಿವಮೊಗ್ಗ: ನೈರುತ್ಯ ರೈಲ್ವೆಯು ಪ್ಲಾಸ್ಟಿಕ್ ಬಳಕೆ ವಿರುದ್ಧ ಪ್ರಯಾಣಿಕರಿಗೆ ಜಾಗೃತಿ ಮೂಡಿಸುವ ಎರಡು ತಿಂಗಳ ಅಭಿಯಾನ ಏರ್ಪಡಿಸಿದೆ. ಕಳೆದ ಒಂದು ವಾರದಿಂದ ಅಭಿಯಾನ ಆರಂಭಗೊಂಡಿದ್ದು, ಪ್ರಯಾಣಿಕರಿಗೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಹೇಳುವ ಕೆಲಸ ಮಾಡಲಾಗುತ್ತಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಟಿಕೆಟ್ ಪರಿವೀಕ್ಷಕರು, ಸೆಕ್ಯೂರಿಟಿ ಗಾರ್ಡ್ ಗಳು ಪ್ಲಾಸ್ಟಿಕ್ ಬಳಕೆ ನಿಷೇಧ ಪ್ರಚಾರ ಅಭಿಯಾನ ನಡೆಸಿದ್ದಾರೆ. ಶಿವಮೊಗ್ಗದ ಮತ್ತು ಸಾಗರದಲ್ಲಿ ಈಗಾಗಲೇ ರೈಲ್ವೆ ನಿಲ್ದಾಣದೊಳಗೆ ಪ್ಲಾಸ್ಟಿಕ್ ತಂದ ಪ್ರಯಾಣಿಕರಿಗೆ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆದಿದೆ.
ಕಳೆದ ವಾರ ಮೈಸೂರಿನಲ್ಲಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ ಅಭಿಯಾನ ವೇಳೆ 2,300 ಪ್ರಯಾಣಿಕರನ್ನು ಪರಿಶೀಲಿಸಲಾಗಿ 400 ಕ್ಯಾರಿಬ್ಯಾಗ್ ಬಳಸಿದ್ದರು.
ಎರಡು ತಿಂಗಳ ಬಳಿಕ ದಂಡ | ಮೊದಲ ಹಂತದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಿರಲು ಜಾಗೃತಿ ಮೂಡಿಸಲಾಗುತ್ತಿದೆ. ಎರಡು ತಿಂಗಳ ನಂತರ ಪ್ಲಾಸ್ಟಿಕ್ ನೊಂದಿಗೆ ರೈಲು ನಿಲ್ದಾಣಕ್ಕೆ ಬಂದಲ್ಲಿ ದಂಡ ವಿಧಿಸಲಾಗುವುದು ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
https://www.suddikanaja.com/2021/01/28/penalty-on-plastic-by-shivamogga-corporation/