ಸುದ್ದಿ ಕಣಜ.ಕಾಂ
ಭದ್ರಾವತಿ: ಬಿಜೆಪಿ ಘಟಕದಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಕೋವಿಡ್ ಸುರಕ್ಷಾ ಪಡೆಗೆ ಶನಿವಾರ ಚಾಲನೆ ನೀಡಲಾಯಿತು.
READ | ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಕೊರೊನಾ ಶತಕ, 14 ಸಾವು, ಎಲ್ಲಿ ಎಷ್ಟು ಪ್ರಕರಣ?
ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಹಾಗೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲಿ ಎಂಬ ಕಾರಣಕ್ಕೆ ಒಂದು ಆಂಬ್ಯುಲೆನ್ಸ್ ನೀಡಲಾಯಿತು.
ಭದ್ರಾವತಿಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಅಧಿಕವಿದೆ. ಈ ಕಾರಣಕ್ಕಾಗಿ ಕಠಿಣ ಕಾನೂನು ಜಾರಿಗೆ ತರಲಾಗಿದೆ. ಸೋಂಕಿಗೆ ಬ್ರೇಕ್ ಹಾಕುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅನಗತ್ಯವಾಗಿ ಓಡಾಡಬಾರದು. ಸುರಕ್ಷಾ ಪಡೆಯಿಂದ ನೀಡಲಾಗಿರುವ ಸೌಲಭ್ಯಗಳನ್ನು ಬಳಸಿಕೊಳ್ಳಿ.
– ಕೆ.ಎಸ್.ಈಶ್ವರಪ್ಪ, ಸಚಿವ
ಅಲ್ಲದೇ, ಪ್ರತಿ ದಿನ ಆಸ್ಪತ್ರೆಯಲ್ಲಿರುವ ರೋಗಿಗಳ ಸಂಬಂಧಿಕರಿಗೆ ಉಚಿತ ಊಟದ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ದತ್ತಾತ್ರಿ, ಮಂಡಲ ಅಧ್ಯಕ್ಷ ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಶ್ರೀನಾಥ್, ನಗರ ಸಭೆ ಸದಸ್ಯ ಕದಿರೇಶ್, ನಗರ ನೀರು ಮತ್ತು ಒಳಚರಂಡಿ ನಿಗಮದ ನಿರ್ದೇಶಕ ಮಂಗೋಟೆ ರುದ್ರೇಶ್ ಉಪಸ್ಥಿತರಿದ್ದರು.
https://www.suddikanaja.com/2021/05/18/ambulance-will-seize-if-they-charge-heavy-amount-to-transport-died-body/