ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
https://www.suddikanaja.com/2021/04/23/shivamogga-is-ready-for-weekend-curfew/
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24 ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲ ಕೈಗಾರಿಕೆಗಳು, ಕಂಪನಿಗಳು ಮತ್ತು ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಸೂಚನೆ ನೀಡಿದ್ದಾರೆ.
ಅಂತಹ ಸಂಸ್ಥೆಗಳು ಸಿಬ್ಬಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಒದಗಿಸಿರಬೇಕು. ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆ ಒದಗಿಸುವ ಸಂಸ್ಥೆಗಳ ಸಿಬ್ಬಂದಿಗೆ ವಾಹನ ಸಂಚಾರಕ್ಕೆ ಅವಕಾಶ ಇರಲಿದೆ ಎಂದಹ ಹೇಳಿದ್ದಾರೆ.
ಯಾವುದಕ್ಕೆ ಅವಕಾಶ, ನಿರ್ಬಂಧ | ಆಸ್ಪತ್ರೆಗೆ ತೆರಳಬೇಕಾದ ರೋಗಿಗಳು, ಕೋವಿಡ್ ಲಸಿಕೆ ಪಡೆಯಲು ತೆರಳುವವರ ಸಂಚಾರಕ್ಕೆ ಅನುಮತಿಯಿದೆ. ದಿನಸಿ, ತರಕಾರಿ, ಹಾಲು ಅವಶ್ಯಕ ವಸ್ತುಗಳ ಮಾರಾಟ ಮಳಿಗೆಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಅವಕಾಶವಿದೆ. ತಳ್ಳುಗಾಡಿ ಮಾರಾಟಗಾರರು ಸಹ ಈ ಅವಧಿಯಲ್ಲಿ ವ್ಯಾಪಾರ ಮಾಡಬಹುದು. ಮದ್ಯ ಮಾರಾಟ ಅಂಗಡಿಗಳಿಂದ ಪಾರ್ಸೆಲ್ ಮಾತ್ರ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಕೊಂಡೊಯ್ಯಬಹುದು. ಎಲ್ಲ ರೀತಿಯ ಸಾಮಗ್ರಿಗಳ ಹೋಮ್ ಡೆಲಿವರಿಗೆ ದಿನವಿಡೀ ಅವಕಾಶವಿದೆ. ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿದೆ ಎಂದು ತಿಳಿಸಿದ್ದಾರೆ.
ವಿವಾಹಗಳಲ್ಲಿ 40 ಜನರಿಗೆ ಅವಕಾಶ | ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ, 40 ಮಂದಿಗೆ ಮೀರದಂತೆ ಮನೆಯಲ್ಲಿ ನೆರವೇರಿಸಬಹುದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗರಿಷ್ಠ 5ಮಂದಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
https://www.suddikanaja.com/2021/05/29/lock-down-for-one-week-bank-will-open/