ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ತಿಳಿಸಿದರು.
ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
READ | ಮಹಿಳೆಯ ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿ ಅರೆಸ್ಟ್
ಜುಲೈ 15ರಂದು ಬೆಳಗ್ಗೆ 11 ಗಂಟೆಗೆ ಅವರು ನೇರವಾಗಿ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಲಿದ್ದಾರೆ.
ತಾಂಡದಲ್ಲಿ ಲಂಬಾಣಿ ಜನರ ಕುಂದು ಕೊರತೆ ಕುರಿತು ಸಂವಾದ ನಡೆಸುವರು. ನಂತರ 3ಕ್ಕೆ ಶಿಕಾರಿಪುರಕ್ಕೆ ಬರಲಿದ್ದಾರೆ. ಸಂಜೆ 5ಕ್ಕೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡಕ್ಕೆ ಭೇಟಿ ನೀಡಿ ಲಂಬಾಣಿ ಜನಾಂಗದವರ ಜತೆ ಸಂವಾದದಲ್ಲಿ ಭಾಗವಹಿಸುವರು. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಿ ಜು.16ರಂದು ಬೆಂಗಳೂರಿಗೆ ತೆರಳುವರು ಎಂದು ಹೇಳಿದರು.