ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆದಾಯ ಮೀರಿ ಆಸ್ತಿ ಹೊಂದಿದ್ದಾರೆ ಎನ್ನಲಾದ ಕೋಲಾರ ನಗರಸಭೆ ಯೋಜನಾಧಿಕಾರಿಯ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಸರಣಿ ಎಸಿಬಿ ದಾಳಿ ನಡೆದಿದೆ.
ಶಿವಮೊಗ್ಗದ ಕಲ್ಲಹಳ್ಳಿಯ ಶಿವಪ್ಪ ನಾಯಕ ಬಡಾವಣೆಯಲ್ಲಿರುವ ಕೃಷ್ಣಪ್ಪ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಅದೇ ರೀತಿ, ಕೋಲಾರದ ಮಾಲೂರು, ಚನ್ನಗಿರಿ, ಬೆಂಗಳೂರಿನಲ್ಲಿರುವ ಇವರ ಮನೆಯ ಮೇಲೆ ದಾಳಿ ಮಾಡಲಾಗಿದೆ.