ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮಹಾನಗರ ಪಾಲಿಕೆಯಿಂದ ಸೋಮವಾರ ಮುಚ್ಚಲಾಗುತ್ತಿದೆ.
ನಗರದ ರಾಘವೇಂದ್ರ ಸ್ವಾಮಿ ಮಠ, ತಿಲಕ್ ನಗರ ರಸ್ತೆಗಳಲ್ಲಿನ ಗುಂಡಿಗಳನ್ನು ಎಂ ಸ್ಯಾಂಡ್ ಹಾಕಿ ಮುಚ್ಚಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳಿಂದಾಗಿರುವ ಗುಂಡಿಗಳನ್ನು ಮುಚ್ಚಲಾಗುತ್ತಿದೆ.