ಸುದ್ದಿ ಕಣಜ.ಕಾಂ
ಶಿವಮೊಗ್ಗ: 2021-22ನೇ ಸಾಲಿನಲ್ಲಿ ಆತ್ಮ ಯೋಜನೆ ಅಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದಲ್ಲಿ ಆತ್ಮ ಯೋಜನೆ ಅಡಿ ರಚಿತವಾದ ಉತ್ತಮ ಗುಂಪುಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
READ | ಯೂನಿಯನ್ ಬ್ಯಾಂಕ್ ಎಟಿಎಂ ಧ್ವಂಸ, ಕಳ್ಳರ ವಿಫಲ ಯತ್ನ
ಅಂತಿಮ ದಿನಾಂಕ | ಅರ್ಜಿ ಸಲ್ಲಿಸಲು ಆಗಸ್ಟ್ 13 ಕಡೆಯ ದಿನವಾಗಿದ್ದು, ಆಸಕ್ತ ರೈತರು, ರೈತ ಮಹಿಳೆಯರು, ರೈತ ಗುಂಪಿನವರು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದೆಂದು ಆತ್ಮ ಯೋಜನಾ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು 1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.