ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ‘ನೋ ನೆಟ್ವರ್ಕ್, ನೋ ವೋಟಿಂಗ್’ ಅಭಿಯಾನಕ್ಕೆ ಬಿ.ಎಸ್.ಎನ್.ಎಲ್. ಅಧಿಕಾರಿಗಳು ಸ್ಪಂದನೆ ನೀಡಿದ್ದಾರೆ.
READ | ಮಳೆ ತಗ್ಗಿದರೂ ಕುಸಿಯುತ್ತಿವೆ ಗುಡ್ಡ, ಆತಂಕದಲ್ಲಿ ಮಲೆನಾಡಿನ ಜನ, ಎಲ್ಲೆಲ್ಲಿ ಏನೇನು ಹಾನಿ
ಕರೂರು, ಭಾರಂಗಿ ವ್ಯಾಪ್ತಿಯ ಗ್ರಾಮಗಳಲ್ಲಿನ ನೆಟ್ವರ್ಕ್ ಸಮಸ್ಯೆಯ ಬಗ್ಗೆ ನಡೆದ ಅಭಿಯಾನದ ಚುರುಕು ಮುಟ್ಟಿದ್ದೇ ತಹಸೀಲ್ದಾರ್ ಅವರು ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದನ್ನು ಪರಿಶೀಲಿಸುವುದಕ್ಕಾಗಿ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದ್ದಾರೆ.
ಆರು ಗ್ರಾಮಗಳಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. ಇದರ ಬಗ್ಗೆ ಬಿ.ಎಸ್.ಎನ್.ಎಲ್. ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
– ಚಂದ್ರಶೇಖರ್ ನಾಯ್ಕ್, ತಹಸೀಲ್ದಾರ್
ನೆಟ್ವರ್ಕ್ ಸಮಸ್ಯೆಗೆ ಲಭ್ಯ ಪರಿಹಾರ ಮಾರ್ಗಗಳನ್ನು ಕುರಿತು ಚರ್ಚಿಸಲಾಗಿದೆ. ಉನ್ನತ ಮಟ್ಟದ ಬಿ.ಎಸ್.ಎನ್.ಎಲ್. ಅಧಿಕಾರಿಗಳಿಗೆ ಪತ್ರ ಬರೆಯುವಂತೆ ನಿರ್ಧಾರ ಕೈಗೊಳ್ಳಲಾಗಿದೆ.