ಮೂರನೇ ಅಲೆ ಹೊಸ್ತಿಲಲ್ಲಿದ್ದರೂ ಶಿವಮೊಗ್ಗ, ಭದ್ರಾವತಿಯಲ್ಲಿ ಇಳಿಮುಖವಾಗದ ಕೊರೊನಾ ಪ್ರಕರಣ?

 

 

ಸುದ್ದಿ ಕಣಜ.ಕಾಂ | SHIVAMOGGA | HEALTH
ಶಿವಮೊಗ್ಗ: ನೆರೆಯ ಕೇರಳಾ ಮತ್ತು ಮಹಾರಾಷ್ಟ್ರ ಹಾಗೂ ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಅದಕ್ಕಾಗಿ, ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಆದರೆ, ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಕೆಯಾಗಿಲ್ಲ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ 36 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 30 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.

https://www.suddikanaja.com/2021/08/04/high-alert-in-shivamogga-due-to-covid-third-wave/

ತಾಲೂಕುವಾರು ವರದಿ‌ | ಶಿವಮೊಗ್ಗದಲ್ಲಿ‌ 12, ಭದ್ರಾವತಿ 12, ಶಿಕಾರಿಪುರ 1, ತೀರ್ಥಹಳ್ಳಿ 5, ಸೊರಬ 0, ಹೊಸನಗರ 1, ಸಾಗರ 5 ಮತ್ತು ಬಾಹ್ಯ ಜಿಲ್ಲೆಯ 0 ಸೋಂಕು ಇರುವುದು ಪತ್ತೆಯಾಗಿದೆ.
ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ರೋಗದ ಲಕ್ಷಣಗಳನ್ನು ಹೊಂದಿರುವ 3,714 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹಳೆಯದ್ದೂ ಸೇರಿ ಒಟ್ಟು 2,517 ವರದಿಗಳು ನೆಗೆಟಿವ್ ಇರುವುದು ದೃಢಪಟ್ಟಿದೆ.
ಎಲ್ಲಿ ಎಷ್ಟು ಜನ ಚಿಕಿತ್ಸೆ | ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 44 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ, ಡಿಸಿಎಚ್‍ಸಿ 21, ಕೋವಿಡ್ ಕೇರ್ ಸೆಂಟರ್ ನಲ್ಲಿ 30, ಖಾಸಗಿ ಆಸ್ಪತ್ರೆಯಲ್ಲಿ 19, ಹೋಮ್ ಐಸೋಲೇಷನ್ ನಲ್ಲಿ 164 ಹಾಗೂ ಟ್ರಿಯೇಜ್ ಕೇಂದ್ರದಲ್ಲಿ 2 ಸೋಂಕಿತರಿದ್ದಾರೆ. 280 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

https://www.suddikanaja.com/2021/05/30/covid-second-wave-hit-shivamogga/

error: Content is protected !!