ಸುದ್ದಿ ಕಣಜ.ಕಾಂ | NATIONAL | POLITICS
ಶಿವಮೊಗ್ಗ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಗುರುತಿಸಿ ಸುರಕ್ಷಿತವಾಗಿ ಕರೆತರಲು ಹಿರಿಯ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
https://www.suddikanaja.com/2021/03/04/ips-officer-yatish-chandra-coming-back-to-karnataka-cadre/
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ರಕ್ಷಣಾ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಿ, ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಪ್ರಯತ್ನ ಮುಂದುವರೆಯಲಿದೆ. ಈಗಾಗಲೇ ರಾಜ್ಯದ 9 ಜನರನ್ನು ತಾಯ್ನಾಡಿಗೆ ಕರೆ ತರಲಾಗಿದೆ ಎಂದರು.
ಪೊಲೀಸ್ ಬಲ ಹೆಚ್ಚಿಸಲು ಅಗತ್ಯ ಕ್ರಮ
ರಾಜ್ಯದ ಎಲ್ಲ ಜಿಲ್ಲೆಯ ಪೊಲೀಸ್ ಇಲಾಖೆಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ರಕ್ಷಣೆ ಬಗ್ಗೆ ವಿಶೇಷ ಕ್ರಮ ವಹಿಸಲಾಗುತ್ತಿದೆ. ಇಲಾಖೆಯ ನ್ಯೂನತೆಗಳನ್ನು ಅರಿತು ಸರಿಪಡಿಸಲು ಯತ್ನಿಸಲಾಗುವುದು. ಅಲ್ಲದೇ ಪೊಲೀಸ್ ಬಲವನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಕ್ಯಾಮೆರಾ
ರಾಜ್ಯದ ಎಲ್ಲ ನಗರಗಳ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಇಲಾಖೆಯಿಂದ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಂತೆಯೇ ಖಾಸಗಿ ಸಂಘ-ಸAಸ್ಥೆಗಳವರು, ಉದ್ದಿಮೆದಾರರು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಈ ಕ್ಯಾಮರಾಗಳ ಚಿತ್ರಿತ ಭಾಗವನ್ನು ಪೊಲೀಸ್ ಇಲಾಖೆಯ ಅಗತ್ಯಗಳಿಗೆ ಒದಗಿಸುವಂತೆಯೂ ಸೂಚಿಸಲಾಗಿದೆ ಎಂದು ತಿಳಿಸಿದರು.
https://www.suddikanaja.com/2020/11/11/cm-formula-does-to-increase-the-punishment-act/