ಸುದ್ದಿ ಕಣಜ.ಕಾಂ | TALUK | SIGANDUR
ಸಾಗರ: ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹಾಲಪ್ಪ ಅವರು ಶ್ರೀ ಕ್ಷೇತ್ರ ಸಿಗಂದೂರಿಗೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕಿನ ಶರಾವತಿ ಹಿನ್ನೀರಿನ ಕಳಸವಳ್ಳಿಯಲ್ಲಿ ನೆಡೆಯುತ್ತಿರುವ ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಅವರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ರವಿಕುಮಾರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ.ಡಿ.ಮೇಫರಾಜ್, ಶಾಸಕ ಹರತಾಳು ಹಾಲಪ್ಪ, ನಾಗರಾಜ್ ಬೊಬ್ಬಿಗೆ, ಪ್ರಸನ್ನ ಕೆರೆಕೈ ಉಪಸ್ಥಿತರಿದ್ದರು.