ಸುದ್ದಿ ಕಣಜ.ಕಾಂ | KARNATAKA | PROTEST
ಶಿವಮೊಗ್ಗ: ರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸೆಪ್ಟೆಂಬರ್ 13ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತಿದೆ.
https://www.suddikanaja.com/2020/12/02/karnataka-rajya-raitha-sangha-protest-against-central-government/
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್. ಆರ್. ಬಸವರಾಜಪ್ಪ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೈಬಿಡುವಂತೆ ಹಾಗೂ ವಿದ್ಯುಚ್ಚಕ್ತಿ ಖಾಸಗೀಕರಣವನ್ನು ವಿರೋಧಿಸಿ, ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಮುತ್ತಿಗೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದ ನಾನಾ ಭಾಗಗಳಿಂದ ರೈತರು ವಿಧಾನಸೌಧ ಮುತ್ತಿಗೆ ಚಳವಳಿಯಲ್ಲಿ ಪಾಲ್ಗೊಳ್ಳುತಿದ್ದಾರೆ. ಶಿವಮೊಗ್ಗದಿಂದ ಒಂದು ಸಾವಿರಕ್ಕೂ ಅಧಿಕ ರೈತರು ಅಗಮಿಸಲಿದ್ದಾರೆ. ಅಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ರೈತರು ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.
ವಿದ್ಯುತ್ ಖಾಸಗೀಕರಣದಿಂದ ತೊಂದರೆ
ವಿದ್ಯುತ್ ಖಾಸಗೀಕರಣಗೊಳಿಸಿದ್ದಲ್ಲಿ ಬಡ ರೈತರಿಗೆ ತೊಂದರೆ ಆಗಲಿದೆ. ಭಾಗ್ಯಜ್ಯೋತಿ ಸೇರಿದಂತೆ ರೈತರು ಮತ್ತು ಬಡವರಿಗಾಗಿ ಇರುವ ಯೋಜನೆಗಳೆಲ್ಲ ಸ್ಥಗಿತಗೊಳ್ಳುತ್ತವೆ ಎಂದರು.
ರೈತ ಸಂಘದ ಹಿಟ್ಟೂರು ರಾಜು, ಇ.ಬಿ. ಜಗದೀಶ್, ಎಸ್. ಶಿವಮೂರ್ತಿ, ಕೆ. ರಾಘವೇಂದ್ರ, ಜ್ಞಾನೇಶ್, ಸಿ. ಚಂದ್ರಪ್ಪ, ಡಿ.ಎಚ್. ರಾಮಚಂದ್ರಪ್ಪ ಇದ್ದರು.
https://www.suddikanaja.com/2021/08/05/congress-protest/